ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ನಡೆಯುವ ಸಮಯದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹರಿಯಾಣದಲ್ಲೂ ಅದೇ ಪರಿಸ್ಥಿತಿ ಇದೆ. ಕರ್ನಾಟಕದ ಜೆಲ ಜಿಲ್ಲೆಗಳಲ್ಲೂ ಮತಗಳ್ಳತನ ಮಾಡಿದ್ದಾರೆ. ಕಳ್ಳ ಮತದಾರರ ಪಟ್ಟಿ ಸೃಷ್ಟಿ ಮಾಡಿ ಮತಗಳನ್ನು ಹಾಕಿಸಿಕೊಂಡಿರುವುದು ಕಂಡುಬಂದಿದೆ. ಹಾಗಾಗಿ ರಾಹುಲ್ ಗಾಂಧಿ ಅವರೇ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.





