ಕೊಡಗು

ಯುದ್ಧದ ವಿಚಾರದಲ್ಲಿ ರಾಜಕೀಯ ‌ಮಾಡುವುದು ಬೇಕಾಗಿಲ್ಲ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಈ ಕುರಿತು ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್‌ ಟ್ರಬಲ್‌ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈಗಾಗಲೇ ದೇಶದಲ್ಲಿ ಯಾವುದೇ ಗ್ಯಾಸ್ ಸಮಸ್ಯೆ ಇಲ್ಲ. ಎಲ್ಲಾ ರಾಜ್ಯಗಳಿಗೆ ಗ್ಯಾಸ್ ಸರಬರಾಜು ಅಗುತ್ತಿದೆ. ಈಗಾಗಲೇ ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅಧಿವೇಶನದಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರು ಭಾರತದಲ್ಲಿ ಯಾವುದೇ ರೀತಿಯಲ್ಲಿ ಗ್ಯಾಸ್ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ಗ್ಯಾಸ್ ಉತ್ಪಾದನೆ ಹೆಚ್ಚು ಮಾಡಲು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ. ಈ‌ ಹಿಂದೆ ಒಂದು ಒಂದು ಜಾಗದಲ್ಲಿ ತೆಗೆದುಕೊಳ್ಳುತ್ತಿದ್ರು‌. ಅದರೆ ಇದೀಗ ಎಲ್ಲಾ ಕಡೆಯಿಂದಲೂ LPG ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.

ಇನ್ನು ಯುದ್ಧದ ವಿಚಾರದಲ್ಲಿ ರಾಜಕೀಯ ‌ಮಾಡುವುದು ಬೇಕಾಗಿಲ್ಲ. ಯಾವುದೋ ಒಂದು ನಮ್ಮ ನಿಯಂತ್ರಣದಲ್ಲಿ ಇಲ್ಲದೇ ಇರುವ ಯುದ್ದದಿಂದ ಈ ರೀತಿಯ ಸಮಸ್ಯೆ ಅಗುತ್ತಿದೆ. ಯುದ್ದದಿಂದ ಸಾಕಷ್ಟು ಸಮಸ್ಯೆ ಅಗುತ್ತಿದ್ರು ಭಾರತ ಸರ್ಕಾರ ಎಲ್ಲರಿಗೂ LPG ಕೋಡುವ ಕೆಲಸ ಮಾಡುತ್ತಿದೆ. ಈ ರೀತಿಯ ಹೇಳಿಕೆ ಕೊಟ್ಟಿಕೊಂಡು ರಾಜಕೀಯ ಲಾಭ ಪಡೆಯುವುದು ಅತ್ಯಂತ ಖಂಡನೀಯ ಎಂದರು.

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

19 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago