ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್ ಟ್ರಬಲ್ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಈಗಾಗಲೇ ದೇಶದಲ್ಲಿ ಯಾವುದೇ ಗ್ಯಾಸ್ ಸಮಸ್ಯೆ ಇಲ್ಲ. ಎಲ್ಲಾ ರಾಜ್ಯಗಳಿಗೆ ಗ್ಯಾಸ್ ಸರಬರಾಜು ಅಗುತ್ತಿದೆ. ಈಗಾಗಲೇ ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅಧಿವೇಶನದಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರು ಭಾರತದಲ್ಲಿ ಯಾವುದೇ ರೀತಿಯಲ್ಲಿ ಗ್ಯಾಸ್ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ಗ್ಯಾಸ್ ಉತ್ಪಾದನೆ ಹೆಚ್ಚು ಮಾಡಲು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ. ಈ ಹಿಂದೆ ಒಂದು ಒಂದು ಜಾಗದಲ್ಲಿ ತೆಗೆದುಕೊಳ್ಳುತ್ತಿದ್ರು. ಅದರೆ ಇದೀಗ ಎಲ್ಲಾ ಕಡೆಯಿಂದಲೂ LPG ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.
ಇನ್ನು ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಕಾಗಿಲ್ಲ. ಯಾವುದೋ ಒಂದು ನಮ್ಮ ನಿಯಂತ್ರಣದಲ್ಲಿ ಇಲ್ಲದೇ ಇರುವ ಯುದ್ದದಿಂದ ಈ ರೀತಿಯ ಸಮಸ್ಯೆ ಅಗುತ್ತಿದೆ. ಯುದ್ದದಿಂದ ಸಾಕಷ್ಟು ಸಮಸ್ಯೆ ಅಗುತ್ತಿದ್ರು ಭಾರತ ಸರ್ಕಾರ ಎಲ್ಲರಿಗೂ LPG ಕೋಡುವ ಕೆಲಸ ಮಾಡುತ್ತಿದೆ. ಈ ರೀತಿಯ ಹೇಳಿಕೆ ಕೊಟ್ಟಿಕೊಂಡು ರಾಜಕೀಯ ಲಾಭ ಪಡೆಯುವುದು ಅತ್ಯಂತ ಖಂಡನೀಯ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…