ಕೊಡಗು

ಜನರ ಹಿತಾಶಕ್ತಿ ಕಾಯುವ ಆರಕ್ಷಕರಿಗಿಲ್ಲ ರಕ್ಷಣೆ

ಸುಬ್ರಹ್ಮಣ್ಯ : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡ ಸೂಕ್ತ ರೀತಿಯಲ್ಲಿಲ್ಲದೆ, ಟಾರ್ಪಲ್‌ ಹೊದಿಕೆಯ ಹಳೆ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯ ಪೊಲೀಸರದ್ದು. ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್‌ ಠಾಣೆಯ ಕಟ್ಟಡಕ್ಕೆ ಸುಮಾರು 50 ವರ್ಷಗಳಾಗುತ್ತ ಬಂದಿದ್ದು, ಇದು ಸುಮಾರು 15 ವರ್ಷಗಳವರೆಗೆ ಕಡಬ ಪೊಲೀಸ್‌ ಠಾಣೆಯ ಹೊರ ಠಾಣೆಯಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಠಾಣೆ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತದೆ. ಇದಕ್ಕಾಗಿ ಮೇಲ್ಛಾವಣಿಗೆ ಪ್ಲಾಸ್ಟಿಕ್‌ ಟಾರ್ಪಲು ಹಾಸಲಾಗಿದೆ.

ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿರುವ 50 ವರ್ಷಗಳ ಇತಿಹಾಸದ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಮೂರು ತಿಂಗಳ ಹಿಂದೆ ಗೃಹ ಸಚಿವರು ಭೇಟಿ ನೀಡಿ ನೂತನ ಠಾಣೆಯ ಕಟ್ಟಡದ ಕೆಲಸ ಕೂಡಲೇ ಆರಂಭಿಸಿ ವರ್ಷದೊಳಗೆ ಠಾಣೆ ಕಾರ್ಯಾರಂಭ ಮಾಡುವ ಬಗ್ಗೆ ಭರವಸೆ ನೀಡಿ ಹೋಗಿದ್ದರು. ಆದರೆ ಇದುವರೆಗೂ ಠಾಣೆ ಕಾಮಗಾರಿ ಆರಂಭ ಆಗಲೇ ಇಲ್ಲ.

andolana

Recent Posts

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

4 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

4 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

4 hours ago

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…

4 hours ago

ಸಂಶೋಧನೆಗೆ ಸಿಗದ ಪ್ರಾಮುಖ್ಯತೆ : ವಿಶ್ರಾಂತ ಕುಲಪತಿ ರಂಗಪ್ಪ ಬೇಸರ

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…

4 hours ago

ಆಹಾರದ ಮಹತ್ವ ಕುರಿತು ಅರಿವು ಅಗತ್ಯ : ಕೃಷಿ ಸಚಿವ.ಚಲುವರಾಯಸ್ವಾಮಿ

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…

5 hours ago