ಕೊಡಗು

ಜನರ ಹಿತಾಶಕ್ತಿ ಕಾಯುವ ಆರಕ್ಷಕರಿಗಿಲ್ಲ ರಕ್ಷಣೆ

ಸುಬ್ರಹ್ಮಣ್ಯ : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡ ಸೂಕ್ತ ರೀತಿಯಲ್ಲಿಲ್ಲದೆ, ಟಾರ್ಪಲ್‌ ಹೊದಿಕೆಯ ಹಳೆ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯ ಪೊಲೀಸರದ್ದು. ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್‌ ಠಾಣೆಯ ಕಟ್ಟಡಕ್ಕೆ ಸುಮಾರು 50 ವರ್ಷಗಳಾಗುತ್ತ ಬಂದಿದ್ದು, ಇದು ಸುಮಾರು 15 ವರ್ಷಗಳವರೆಗೆ ಕಡಬ ಪೊಲೀಸ್‌ ಠಾಣೆಯ ಹೊರ ಠಾಣೆಯಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಠಾಣೆ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತದೆ. ಇದಕ್ಕಾಗಿ ಮೇಲ್ಛಾವಣಿಗೆ ಪ್ಲಾಸ್ಟಿಕ್‌ ಟಾರ್ಪಲು ಹಾಸಲಾಗಿದೆ.

ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿರುವ 50 ವರ್ಷಗಳ ಇತಿಹಾಸದ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಮೂರು ತಿಂಗಳ ಹಿಂದೆ ಗೃಹ ಸಚಿವರು ಭೇಟಿ ನೀಡಿ ನೂತನ ಠಾಣೆಯ ಕಟ್ಟಡದ ಕೆಲಸ ಕೂಡಲೇ ಆರಂಭಿಸಿ ವರ್ಷದೊಳಗೆ ಠಾಣೆ ಕಾರ್ಯಾರಂಭ ಮಾಡುವ ಬಗ್ಗೆ ಭರವಸೆ ನೀಡಿ ಹೋಗಿದ್ದರು. ಆದರೆ ಇದುವರೆಗೂ ಠಾಣೆ ಕಾಮಗಾರಿ ಆರಂಭ ಆಗಲೇ ಇಲ್ಲ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

11 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

12 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago