ಸುಬ್ರಹ್ಮಣ್ಯ : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡ ಸೂಕ್ತ ರೀತಿಯಲ್ಲಿಲ್ಲದೆ, ಟಾರ್ಪಲ್ ಹೊದಿಕೆಯ ಹಳೆ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯ ಪೊಲೀಸರದ್ದು. ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್ ಠಾಣೆಯ ಕಟ್ಟಡಕ್ಕೆ ಸುಮಾರು 50 ವರ್ಷಗಳಾಗುತ್ತ ಬಂದಿದ್ದು, ಇದು ಸುಮಾರು 15 ವರ್ಷಗಳವರೆಗೆ ಕಡಬ ಪೊಲೀಸ್ ಠಾಣೆಯ ಹೊರ ಠಾಣೆಯಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಠಾಣೆ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತದೆ. ಇದಕ್ಕಾಗಿ ಮೇಲ್ಛಾವಣಿಗೆ ಪ್ಲಾಸ್ಟಿಕ್ ಟಾರ್ಪಲು ಹಾಸಲಾಗಿದೆ.
ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿರುವ 50 ವರ್ಷಗಳ ಇತಿಹಾಸದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮೂರು ತಿಂಗಳ ಹಿಂದೆ ಗೃಹ ಸಚಿವರು ಭೇಟಿ ನೀಡಿ ನೂತನ ಠಾಣೆಯ ಕಟ್ಟಡದ ಕೆಲಸ ಕೂಡಲೇ ಆರಂಭಿಸಿ ವರ್ಷದೊಳಗೆ ಠಾಣೆ ಕಾರ್ಯಾರಂಭ ಮಾಡುವ ಬಗ್ಗೆ ಭರವಸೆ ನೀಡಿ ಹೋಗಿದ್ದರು. ಆದರೆ ಇದುವರೆಗೂ ಠಾಣೆ ಕಾಮಗಾರಿ ಆರಂಭ ಆಗಲೇ ಇಲ್ಲ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…