ಕೊಡಗು

ಯದುವೀರ್‌ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ನೂಕು ನುಗ್ಗಲು; ಇಬ್ಬರು ಬಿಜೆಪಿ ಮಾಜಿ ಶಾಸಕರ ಪರ್ಸ್‌ ಎಗರಿಸಿದ ಕಳ್ಳರು!

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ ಶಾಸಕರ ಪರ್ಸ್‌ ಸೇರಿದಂತೆ ಅನೇಕರ ಜೇಬಿನಲ್ಲಿದ್ದ ಪರ್ಸ್‌ ಕಳ್ಳತ ಮಾಡಿದ್ದಾರೆ. ಒಟ್ಟು ಅಂದಾಜು 5 ಲಕ್ಷ ರೂಪಾಯಿಗೂ ಅಧಿಕ ಹಣ ಲಪಟಾಯಿಸಿದ್ದಾರೆ.

ಇಂದು ( ಮಾರ್ಚ್‌ 27 ) ಕುಶಾಲನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ಅಷ್ಟು ಭದ್ರತೆಯ ನಡುವೆಯೂ ಕಳ್ಳತನವಾಗಿದೆ. ಅದರಲ್ಲೂ ಮುಖ್ಯವಾಗಿ ಬಿಜೆಪಿಯ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್‌ ಮತ್ತು ಕೆಜಿ ಬೋಪಯ್ಯ ಅವರ ಪರ್ಸ್‌ ಸಹ ಕಳ್ಳತನವಾಗಿದೆ. ಅಪ್ಪಚ್ಚು ರಂಜನ್‌ ಅವರ ಪರ್ಸ್‌ನಲ್ಲಿ 25 ಸಾವಿರ ಹಾಗೂ ಬೋಪಯ್ಯ ಅವರ ಪರ್ಸ್‌ನಲ್ಲಿ 17 ಸಾವಿರ ಇತ್ತು. ಇವರಿಬ್ಬರ ಜೊತೆಗೆ ಇನ್ನೂ ಅನೇಕರ ಜೇಬಿನಲ್ಲಿದ್ದ ಪರ್ಸ್‌ ಸಹ ಕಳ್ಳವಾಗಿದೆ. ಕಳ್ಳರ ಪತ್ತೆಗೆ ಮಡಿಕೇರಿ ನಗರ ಪೊಲೀಸರು ಕಾರ್ಯಚರಣೆ ಶುರುಮಾಡಿದ್ದಾರೆ.

ಇನ್ನು ರಾಜಕೀಯ ಕಾರ್ಯಕ್ರಮದಲ್ಲಿ ಈ ರೀತಿ ಕಳ್ಳವಾಗಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕರ್ನಾಟಕದ ರಾಜಕೀಯ ಕಾರ್ಯಕ್ರಮಗಳಲ್ಲಿ ಈ ರೀತಿಯ ಘಟನೆಗಳು ನಡೆದಿರುವುದನ್ನು ಕಾಣಬಹುದು. ಈಗ ಲೋಕಸಭೆ ಚುನಾವಣೆ ಇದೆ, ಜನರು ತಮ್ಮಮ್ಮ ನಾಯಕರನ್ನು ನೋಡಲು ಮುಗಿಬೀಳುವುದು ಸಹಜ. ಇದನ್ನೇ ಕಾಯುವ ಕಳ್ಳರು ಗುಂಪಿನೊಳಗೆ ಬಂದು ಸೇರಿಕೊಂಡು ನೂಕು ನುಗ್ಗಲು ಎಬ್ಬಿಸಿ ಜೇಬುಗಳಿಗೆ ಕೈ ಹಾಕಿ ಪರಾರಿಯಾಗುತ್ತಾರೆ. ರಾಜಕೀಯ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಖದೀಮರಿಂದ ಎಚ್ಚರಿಕೆ ಇರುವುದು ಒಳಿತು.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

8 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago