ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ ಶಾಸಕರ ಪರ್ಸ್ ಸೇರಿದಂತೆ ಅನೇಕರ ಜೇಬಿನಲ್ಲಿದ್ದ ಪರ್ಸ್ ಕಳ್ಳತ ಮಾಡಿದ್ದಾರೆ. ಒಟ್ಟು ಅಂದಾಜು 5 ಲಕ್ಷ ರೂಪಾಯಿಗೂ ಅಧಿಕ ಹಣ ಲಪಟಾಯಿಸಿದ್ದಾರೆ.
ಇಂದು ( ಮಾರ್ಚ್ 27 ) ಕುಶಾಲನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ಅಷ್ಟು ಭದ್ರತೆಯ ನಡುವೆಯೂ ಕಳ್ಳತನವಾಗಿದೆ. ಅದರಲ್ಲೂ ಮುಖ್ಯವಾಗಿ ಬಿಜೆಪಿಯ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಅವರ ಪರ್ಸ್ ಸಹ ಕಳ್ಳತನವಾಗಿದೆ. ಅಪ್ಪಚ್ಚು ರಂಜನ್ ಅವರ ಪರ್ಸ್ನಲ್ಲಿ 25 ಸಾವಿರ ಹಾಗೂ ಬೋಪಯ್ಯ ಅವರ ಪರ್ಸ್ನಲ್ಲಿ 17 ಸಾವಿರ ಇತ್ತು. ಇವರಿಬ್ಬರ ಜೊತೆಗೆ ಇನ್ನೂ ಅನೇಕರ ಜೇಬಿನಲ್ಲಿದ್ದ ಪರ್ಸ್ ಸಹ ಕಳ್ಳವಾಗಿದೆ. ಕಳ್ಳರ ಪತ್ತೆಗೆ ಮಡಿಕೇರಿ ನಗರ ಪೊಲೀಸರು ಕಾರ್ಯಚರಣೆ ಶುರುಮಾಡಿದ್ದಾರೆ.
ಇನ್ನು ರಾಜಕೀಯ ಕಾರ್ಯಕ್ರಮದಲ್ಲಿ ಈ ರೀತಿ ಕಳ್ಳವಾಗಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕರ್ನಾಟಕದ ರಾಜಕೀಯ ಕಾರ್ಯಕ್ರಮಗಳಲ್ಲಿ ಈ ರೀತಿಯ ಘಟನೆಗಳು ನಡೆದಿರುವುದನ್ನು ಕಾಣಬಹುದು. ಈಗ ಲೋಕಸಭೆ ಚುನಾವಣೆ ಇದೆ, ಜನರು ತಮ್ಮಮ್ಮ ನಾಯಕರನ್ನು ನೋಡಲು ಮುಗಿಬೀಳುವುದು ಸಹಜ. ಇದನ್ನೇ ಕಾಯುವ ಕಳ್ಳರು ಗುಂಪಿನೊಳಗೆ ಬಂದು ಸೇರಿಕೊಂಡು ನೂಕು ನುಗ್ಗಲು ಎಬ್ಬಿಸಿ ಜೇಬುಗಳಿಗೆ ಕೈ ಹಾಕಿ ಪರಾರಿಯಾಗುತ್ತಾರೆ. ರಾಜಕೀಯ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಖದೀಮರಿಂದ ಎಚ್ಚರಿಕೆ ಇರುವುದು ಒಳಿತು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…