ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ ಶಾಸಕರ ಪರ್ಸ್ ಸೇರಿದಂತೆ ಅನೇಕರ ಜೇಬಿನಲ್ಲಿದ್ದ ಪರ್ಸ್ ಕಳ್ಳತ ಮಾಡಿದ್ದಾರೆ. ಒಟ್ಟು ಅಂದಾಜು 5 ಲಕ್ಷ ರೂಪಾಯಿಗೂ ಅಧಿಕ ಹಣ ಲಪಟಾಯಿಸಿದ್ದಾರೆ.
ಇಂದು ( ಮಾರ್ಚ್ 27 ) ಕುಶಾಲನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ಅಷ್ಟು ಭದ್ರತೆಯ ನಡುವೆಯೂ ಕಳ್ಳತನವಾಗಿದೆ. ಅದರಲ್ಲೂ ಮುಖ್ಯವಾಗಿ ಬಿಜೆಪಿಯ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಅವರ ಪರ್ಸ್ ಸಹ ಕಳ್ಳತನವಾಗಿದೆ. ಅಪ್ಪಚ್ಚು ರಂಜನ್ ಅವರ ಪರ್ಸ್ನಲ್ಲಿ 25 ಸಾವಿರ ಹಾಗೂ ಬೋಪಯ್ಯ ಅವರ ಪರ್ಸ್ನಲ್ಲಿ 17 ಸಾವಿರ ಇತ್ತು. ಇವರಿಬ್ಬರ ಜೊತೆಗೆ ಇನ್ನೂ ಅನೇಕರ ಜೇಬಿನಲ್ಲಿದ್ದ ಪರ್ಸ್ ಸಹ ಕಳ್ಳವಾಗಿದೆ. ಕಳ್ಳರ ಪತ್ತೆಗೆ ಮಡಿಕೇರಿ ನಗರ ಪೊಲೀಸರು ಕಾರ್ಯಚರಣೆ ಶುರುಮಾಡಿದ್ದಾರೆ.
ಇನ್ನು ರಾಜಕೀಯ ಕಾರ್ಯಕ್ರಮದಲ್ಲಿ ಈ ರೀತಿ ಕಳ್ಳವಾಗಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕರ್ನಾಟಕದ ರಾಜಕೀಯ ಕಾರ್ಯಕ್ರಮಗಳಲ್ಲಿ ಈ ರೀತಿಯ ಘಟನೆಗಳು ನಡೆದಿರುವುದನ್ನು ಕಾಣಬಹುದು. ಈಗ ಲೋಕಸಭೆ ಚುನಾವಣೆ ಇದೆ, ಜನರು ತಮ್ಮಮ್ಮ ನಾಯಕರನ್ನು ನೋಡಲು ಮುಗಿಬೀಳುವುದು ಸಹಜ. ಇದನ್ನೇ ಕಾಯುವ ಕಳ್ಳರು ಗುಂಪಿನೊಳಗೆ ಬಂದು ಸೇರಿಕೊಂಡು ನೂಕು ನುಗ್ಗಲು ಎಬ್ಬಿಸಿ ಜೇಬುಗಳಿಗೆ ಕೈ ಹಾಕಿ ಪರಾರಿಯಾಗುತ್ತಾರೆ. ರಾಜಕೀಯ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಖದೀಮರಿಂದ ಎಚ್ಚರಿಕೆ ಇರುವುದು ಒಳಿತು.
ನವದೆಹಲಿ: ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ…
ನವದೆಹಲಿ: ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ…
ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ…
ತೆರವಾಯಿತೆ ಫುಟ್ಪಾತ್ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…
ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…
ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…