ಕೊಡಗು

ಯದುವೀರ್‌ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ನೂಕು ನುಗ್ಗಲು; ಇಬ್ಬರು ಬಿಜೆಪಿ ಮಾಜಿ ಶಾಸಕರ ಪರ್ಸ್‌ ಎಗರಿಸಿದ ಕಳ್ಳರು!

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ ಶಾಸಕರ ಪರ್ಸ್‌ ಸೇರಿದಂತೆ ಅನೇಕರ ಜೇಬಿನಲ್ಲಿದ್ದ ಪರ್ಸ್‌ ಕಳ್ಳತ ಮಾಡಿದ್ದಾರೆ. ಒಟ್ಟು ಅಂದಾಜು 5 ಲಕ್ಷ ರೂಪಾಯಿಗೂ ಅಧಿಕ ಹಣ ಲಪಟಾಯಿಸಿದ್ದಾರೆ.

ಇಂದು ( ಮಾರ್ಚ್‌ 27 ) ಕುಶಾಲನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ಅಷ್ಟು ಭದ್ರತೆಯ ನಡುವೆಯೂ ಕಳ್ಳತನವಾಗಿದೆ. ಅದರಲ್ಲೂ ಮುಖ್ಯವಾಗಿ ಬಿಜೆಪಿಯ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್‌ ಮತ್ತು ಕೆಜಿ ಬೋಪಯ್ಯ ಅವರ ಪರ್ಸ್‌ ಸಹ ಕಳ್ಳತನವಾಗಿದೆ. ಅಪ್ಪಚ್ಚು ರಂಜನ್‌ ಅವರ ಪರ್ಸ್‌ನಲ್ಲಿ 25 ಸಾವಿರ ಹಾಗೂ ಬೋಪಯ್ಯ ಅವರ ಪರ್ಸ್‌ನಲ್ಲಿ 17 ಸಾವಿರ ಇತ್ತು. ಇವರಿಬ್ಬರ ಜೊತೆಗೆ ಇನ್ನೂ ಅನೇಕರ ಜೇಬಿನಲ್ಲಿದ್ದ ಪರ್ಸ್‌ ಸಹ ಕಳ್ಳವಾಗಿದೆ. ಕಳ್ಳರ ಪತ್ತೆಗೆ ಮಡಿಕೇರಿ ನಗರ ಪೊಲೀಸರು ಕಾರ್ಯಚರಣೆ ಶುರುಮಾಡಿದ್ದಾರೆ.

ಇನ್ನು ರಾಜಕೀಯ ಕಾರ್ಯಕ್ರಮದಲ್ಲಿ ಈ ರೀತಿ ಕಳ್ಳವಾಗಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕರ್ನಾಟಕದ ರಾಜಕೀಯ ಕಾರ್ಯಕ್ರಮಗಳಲ್ಲಿ ಈ ರೀತಿಯ ಘಟನೆಗಳು ನಡೆದಿರುವುದನ್ನು ಕಾಣಬಹುದು. ಈಗ ಲೋಕಸಭೆ ಚುನಾವಣೆ ಇದೆ, ಜನರು ತಮ್ಮಮ್ಮ ನಾಯಕರನ್ನು ನೋಡಲು ಮುಗಿಬೀಳುವುದು ಸಹಜ. ಇದನ್ನೇ ಕಾಯುವ ಕಳ್ಳರು ಗುಂಪಿನೊಳಗೆ ಬಂದು ಸೇರಿಕೊಂಡು ನೂಕು ನುಗ್ಗಲು ಎಬ್ಬಿಸಿ ಜೇಬುಗಳಿಗೆ ಕೈ ಹಾಕಿ ಪರಾರಿಯಾಗುತ್ತಾರೆ. ರಾಜಕೀಯ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಖದೀಮರಿಂದ ಎಚ್ಚರಿಕೆ ಇರುವುದು ಒಳಿತು.

andolana

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

35 mins ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

7 hours ago