ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್ ನೆಮ್ಮೆಲೆ, ಆನ್ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ.
ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ ನಡೆಸುತ್ತಿದ್ದು, ಜಮೀನುಗಳಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ.
ವ್ಯಾಘ್ರ ಕಳೆದ ಎರಡು ತಿಂಗಳಿನಿಂದ ಸುಮಾರು 8 ರಿಂದ 9 ಹಸುಗಳನ್ನು ತಿಂದು ಹಾಕಿದ್ದು, ಜನತೆ ಜೀವಭಯದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುಮಾಡಿದ್ದು, ಸಾಕಾನೆಗಳ ಸಹಾಯದಿಂದ ಪ್ರತ್ಯೇಕ ತಂಡ ಕಟ್ಟಿಕೊಂಡು ಹುಲಿಗಾಗಿ ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದಾರೆ.
ಈ ಹುಲಿಯು ಗಾತ್ರದಲ್ಲಿ ಸಣ್ಣದಾಗಿರುವ ಗಂಡು ಹುಲಿ ಎಂದು ಕ್ಯಾಮರಾಗಳಿಂದ ತಿಳಿದುಬಂದಿದ್ದು, ಹುಲಿ ಸೆರೆ ಹಿಡಿಯುವವರೆಗೂ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…