ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ ಮಂದಮಾಡ ಮುನ್ನಾ ಎಂಬವವರ ತೋಟದಲ್ಲಿ ಗುರುವಾರ ಹುಲಿಯೊಂದು ಕಾಣಿಸಿಕೊಂಡಿದೆ. ಎಂದಿನಂತೆ ಸ್ಥಳೀಯ ನಾಲ್ಕು ಮಂದಿ ತೋಟದ ಕೆಲಸಕ್ಕೆ ತೆರಳಿದ್ದರು. ಕಾರ್ಮಿಕರು ತಮ್ಮ ಕರ್ತವ್ಯ ನಿರತರಾಗಿದ್ದ ಸಂದರ್ಭ ಮಧ್ಯಾಹ್ನ ೧೨.೩೦ರ ವೇಳೆಗೆ ಹುಲಿ ಕಾಣಿಸಿಕೊಂಡಿದೆ.
ಕಾರ್ಮಿಕರು ಭಯದಿಂದ ಕಿರುಚಿ ಹುಲಿ ದಾಳಿಯಿಂದ ಪಾರಾಗಲು ಸ್ಥಳದಿಂದ ಓಡಿಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆಯಲ್ಲಿ ಕಾರ್ಮಿಕರು ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ತೋಟದಲ್ಲಿ ಕೆಲಸ ಅರ್ಧದಲ್ಲೇ ನಿಲ್ಲಿಸಿ ತೋಟದ ಮಾಲೀಕರ ಮನೆಗೆ ಆಗಮಿಸಿದ್ದಾರೆ. ಮಾಲೀಕರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಕಂಡಂಗಾಲ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಹುಲಿಯೊಂದು ಕಾಳುಮೆಣಸು ಕೊಯ್ಯುವ ಕಾರ್ಮಿಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ಅಲ್ಲದೆ ಜಾನುವಾರುಗಳ ಮೇಲೆ ದಾಳಿ ನಡೆಸಿರುವ ಘಟನೆಗಳೂ ನಡೆದಿವೆ. ಇದೀಗ ಮತ್ತೆ ಹುಲಿ ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…