ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ ಮಂದಮಾಡ ಮುನ್ನಾ ಎಂಬವವರ ತೋಟದಲ್ಲಿ ಗುರುವಾರ ಹುಲಿಯೊಂದು ಕಾಣಿಸಿಕೊಂಡಿದೆ. ಎಂದಿನಂತೆ ಸ್ಥಳೀಯ ನಾಲ್ಕು ಮಂದಿ ತೋಟದ ಕೆಲಸಕ್ಕೆ ತೆರಳಿದ್ದರು. ಕಾರ್ಮಿಕರು ತಮ್ಮ ಕರ್ತವ್ಯ ನಿರತರಾಗಿದ್ದ ಸಂದರ್ಭ ಮಧ್ಯಾಹ್ನ ೧೨.೩೦ರ ವೇಳೆಗೆ ಹುಲಿ ಕಾಣಿಸಿಕೊಂಡಿದೆ.
ಕಾರ್ಮಿಕರು ಭಯದಿಂದ ಕಿರುಚಿ ಹುಲಿ ದಾಳಿಯಿಂದ ಪಾರಾಗಲು ಸ್ಥಳದಿಂದ ಓಡಿಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆಯಲ್ಲಿ ಕಾರ್ಮಿಕರು ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ತೋಟದಲ್ಲಿ ಕೆಲಸ ಅರ್ಧದಲ್ಲೇ ನಿಲ್ಲಿಸಿ ತೋಟದ ಮಾಲೀಕರ ಮನೆಗೆ ಆಗಮಿಸಿದ್ದಾರೆ. ಮಾಲೀಕರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಕಂಡಂಗಾಲ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಹುಲಿಯೊಂದು ಕಾಳುಮೆಣಸು ಕೊಯ್ಯುವ ಕಾರ್ಮಿಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ಅಲ್ಲದೆ ಜಾನುವಾರುಗಳ ಮೇಲೆ ದಾಳಿ ನಡೆಸಿರುವ ಘಟನೆಗಳೂ ನಡೆದಿವೆ. ಇದೀಗ ಮತ್ತೆ ಹುಲಿ ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…