ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ ಮಂದಮಾಡ ಮುನ್ನಾ ಎಂಬವವರ ತೋಟದಲ್ಲಿ ಗುರುವಾರ ಹುಲಿಯೊಂದು ಕಾಣಿಸಿಕೊಂಡಿದೆ. ಎಂದಿನಂತೆ ಸ್ಥಳೀಯ ನಾಲ್ಕು ಮಂದಿ ತೋಟದ ಕೆಲಸಕ್ಕೆ ತೆರಳಿದ್ದರು. ಕಾರ್ಮಿಕರು ತಮ್ಮ ಕರ್ತವ್ಯ ನಿರತರಾಗಿದ್ದ ಸಂದರ್ಭ ಮಧ್ಯಾಹ್ನ ೧೨.೩೦ರ ವೇಳೆಗೆ ಹುಲಿ ಕಾಣಿಸಿಕೊಂಡಿದೆ.
ಕಾರ್ಮಿಕರು ಭಯದಿಂದ ಕಿರುಚಿ ಹುಲಿ ದಾಳಿಯಿಂದ ಪಾರಾಗಲು ಸ್ಥಳದಿಂದ ಓಡಿಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆಯಲ್ಲಿ ಕಾರ್ಮಿಕರು ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ತೋಟದಲ್ಲಿ ಕೆಲಸ ಅರ್ಧದಲ್ಲೇ ನಿಲ್ಲಿಸಿ ತೋಟದ ಮಾಲೀಕರ ಮನೆಗೆ ಆಗಮಿಸಿದ್ದಾರೆ. ಮಾಲೀಕರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಕಂಡಂಗಾಲ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಹುಲಿಯೊಂದು ಕಾಳುಮೆಣಸು ಕೊಯ್ಯುವ ಕಾರ್ಮಿಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ಅಲ್ಲದೆ ಜಾನುವಾರುಗಳ ಮೇಲೆ ದಾಳಿ ನಡೆಸಿರುವ ಘಟನೆಗಳೂ ನಡೆದಿವೆ. ಇದೀಗ ಮತ್ತೆ ಹುಲಿ ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…