ಕೊಡಗು: ಕಳೆದ ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.
ಗೋಣಿಕೊಪ್ಪದ ಬಾಳೆಲೆ ದೇವನೂರು ಭಾಗದ ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಸತತ ನಾಲ್ಕನೇ ದಿನವು ಕಾರ್ಯಾಚರಣೆ ಮುಂದುವರಿದಿದ್ದು, ಆದರೆ ಹುಲಿ ಮಾತ್ರ ಇದುವರೆಗೂ ಗೋಚರಿಸಿಲ್ಲ.
ಈ ಬಗ್ಗೆ ಮಾತನಾಡಿದ ಅರಣ್ಯ ಇಲಾಖೆ ಅಧಿಕಾರಿಗಳು, ನಾವು ಕಾರ್ಯಾಚರಣೆ ಮುಂದುವರಿಸಿದ್ದೇವೆ. ಇದರಿಂದ ಹುಲಿ ಈಗ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ. ಹುಲಿ ಪತ್ತೆಗೆ ಶ್ರೀಮಂಗಲ ಹಾಗೂ ಬಾಳೆಲೆ ಭಾಗದ ಅರಣ್ಯದಂಚಿನಲ್ಲಿ ಕ್ಯಾಮರಾ ಅಳವಡಿಸಿ ಜೊತೆಗೆ ಬೋನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ ಹುಲಿ ಕಾರ್ಯಾಚರಣೆಗೆ ಸಾಕಾನೆಗಳನ್ನು ಕೂಡ ಬಳಸಿಕೊಳ್ಳಲಾಗಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಣ ತೊಟ್ಟಿದ್ದಾರೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…