ಕೊಡಗು

ಆನೆ ಮೂಲಕ ಹುಲಿ ಸೆರೆಗೆ ಭರ್ಜರಿ ಕಾರ್ಯಾಚರಣೆ

ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್‌ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ.

ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ರೈತರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಚಲನವಲನ ಕಂಡು ಬಂದಿದ್ದ ಸ್ಥಳಗಳಲ್ಲಿ ಮೂರ್ನಾಲ್ಕು ಬೋನುಗಳನ್ನು ಅಳವಡಿಸಿದೆ.

ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್‌ ನೆಮ್ಮಲೆ ಗ್ರಾಮದಲ್ಲಿ ವನ್ಯಜೀವಿ ಸದಸ್ಯ ಸಂಕೇತ್‌ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಎರಡು ಸಾಕಾನೆ ಮತ್ತು 60 ಸಿಬ್ಬಂದಿ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

37 mins ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

52 mins ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

1 hour ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

2 hours ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

3 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

3 hours ago