ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ.
ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ರೈತರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಚಲನವಲನ ಕಂಡು ಬಂದಿದ್ದ ಸ್ಥಳಗಳಲ್ಲಿ ಮೂರ್ನಾಲ್ಕು ಬೋನುಗಳನ್ನು ಅಳವಡಿಸಿದೆ.
ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ವನ್ಯಜೀವಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಎರಡು ಸಾಕಾನೆ ಮತ್ತು 60 ಸಿಬ್ಬಂದಿ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…