ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ.
ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ ಹಸುವನ್ನು ಹುಲಿ ಓಡಿಸಿಕೊಂಡು ಹೋಗಿ ದಾಳಿ ನಡೆಸಿದೆ. ಆದರೆ ಹಸು ತಪ್ಪಿಸಿಕೊಂಡಿದೆ. ಹಸುವಿಗೆ ಗಾಯಗಳಾಗಿದ್ದು, ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಸ್ಥಳದ ಅನತಿ ದೂರದ ಚೀಪೆ ಕೊಲ್ಲಿ ಎಂಬಲ್ಲಿ ಹಸುವನ್ನು ಬೇಟಿಯಾಡಿ ಸ್ವಲ್ಪ ಭಾಗ ತಿಂದು ಹೋಗಿತ್ತು. ನಂತರ ಮರುದಿನ ಬೆಳಿಗ್ಗೆ ಸಮೀಪದ ಸಿ. ಕೆ ಉತ್ತಪ್ಪನವರ ತೋಟದಲ್ಲಿ ಕಾಣಿಸಿಕೊಂಡಿತು. ಇದೀಗ ಅದೇ ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…