ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ.
ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ ಹಸುವನ್ನು ಹುಲಿ ಓಡಿಸಿಕೊಂಡು ಹೋಗಿ ದಾಳಿ ನಡೆಸಿದೆ. ಆದರೆ ಹಸು ತಪ್ಪಿಸಿಕೊಂಡಿದೆ. ಹಸುವಿಗೆ ಗಾಯಗಳಾಗಿದ್ದು, ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಸ್ಥಳದ ಅನತಿ ದೂರದ ಚೀಪೆ ಕೊಲ್ಲಿ ಎಂಬಲ್ಲಿ ಹಸುವನ್ನು ಬೇಟಿಯಾಡಿ ಸ್ವಲ್ಪ ಭಾಗ ತಿಂದು ಹೋಗಿತ್ತು. ನಂತರ ಮರುದಿನ ಬೆಳಿಗ್ಗೆ ಸಮೀಪದ ಸಿ. ಕೆ ಉತ್ತಪ್ಪನವರ ತೋಟದಲ್ಲಿ ಕಾಣಿಸಿಕೊಂಡಿತು. ಇದೀಗ ಅದೇ ಪ್ರದೇಶದಲ್ಲಿ ಹುಲಿ ಸಂಚರಿಸುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…