ಮಡಿಕೇರಿ : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರುವ ಮೂಲಕ ತಮ್ಮ ಅಸ್ತಿತ್ವ ಉಳಿಸಲು ಪ್ರಯತ್ನಿಸಿದ್ದು, ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬೂದು ಅವರಿಗೂ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಕಷ್ಟು ಗುಂಪುಗಳಾಗಿವೆ. ಯತ್ನಾಳ್, ಈಶ್ವರಪ್ಪ, ಅಶೋಕ್, ಸಿಟಿ ರವಿ ಎಲ್ಲರೂ ಒಂದೊಂದು ಕಡೆ ಹೋಗುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ, ಜನರ ಕುಂದುಕೊರತೆ, ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೋಬ್ಬರೂ ಮಾತನಾಡುತ್ತಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಯೋಜನೆಗಳ ಬಗ್ಗೆಯೂ ಚಿಂತಿಸುತ್ತಿಲ್ಲ. ಎಲ್ಲರೂ ಅವರವರ ವೈಯಕ್ತಿಕ ಅಸ್ತಿತ್ವದ ಬಗ್ಗೆ ಗಮನಹರಿಸಿದ್ದಾರೆ. ಹಾಗೆಯೇ ಪ್ರತಾಪ್ ಸಿಂಹ ಕೂಡ ಅಸ್ತಿತ್ವ ಉಳಿಸಿಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರಿಗೆ ಟಿಕೆಟ್ ನೀಡದೆ ದೂರ ಇಟ್ಟಿರುವುದರಿಂದ ಹೈಲೆಟ್ ಆಗಲು ಕೋರ್ಟ್ಗೆ ಹೋಗಿದ್ದಾರೆ ಎಂದು ಟೀಕಿಸಿದರು.
ಅತಿವೃಷ್ಟಿಯಾಗಿದೆ, ಎಲ್ಲಾ ಜಲಾಶಯಗಳು ತುಂಬಿವೆ. ಜನರು ಕೂಡ ಬಹಳ ಸಂಕಷ್ಟದಲ್ಲಿದ್ದಾರೆ. ರೈತರಿಗೂ ಸಮಸ್ಯೆಯಾಗಿದೆ. ಅದರ ಬಗ್ಗೆ ಯಾರೊಬ್ಬರೂ ಮಾತನಾಡುತ್ತಿಲ್ಲ. ಕೇವಲ ಜನರ ಹಾದಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಭೋಸರಾಜು, ಹಲವು ವರ್ಷಗಳಿಂದ ಈ ಬೇಡಿಕೆ ಇತ್ತು. ಕುರುಬ ಸಮುದಾಯ ಎಲ್ಲೆಲ್ಲಿ ಇದ್ದಾರೆಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಎಲ್ಲಿಯೂ ಗೊಂದಲ ಆಗದ ರೀತಿಯಲ್ಲಿ ಈ ಕಾರ್ಯ ಮಾಡಲಾಗುತ್ತದೆ ಎಂದರು.
ಜಾತಿಗಣತಿಯಲ್ಲಿ ಮತಾಂತರಕ್ಕೂ ಒಂದು ಕಾಲಂ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಒತ್ತಾಯಪೂರ್ವಕವಾಗಿ ಯಾರನ್ನೂ ಸೇರಿಸಲ್ಲ. ತಾವಾಗಿಯೇ ಆಗುವವರಿಗೆ ಅವಕಾಶ ಇದೆ. ಎಲ್ಲಿ ತಪ್ಪಿದೆ ಎಂದು ಹುಡುಕುವುದೇ ಬಿಜೆಪಿ ಅಜೆಂಡಾ. ಜನರಲ್ಲಿ ಗೊಂದಲ ಸೃಷ್ಟಿ ಮಾಡುವುದು, ಉತ್ತಮ ಆಡಳಿತ ವಿರುದ್ದ ಜನತೆಗೆ ಗೊಂದಲ ಮೂಡಿಸುವುದೇ ಇವರ ಕೆಲಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…