ಮಡಿಕೇರಿ : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರುವ ಮೂಲಕ ತಮ್ಮ ಅಸ್ತಿತ್ವ ಉಳಿಸಲು ಪ್ರಯತ್ನಿಸಿದ್ದು, ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬೂದು ಅವರಿಗೂ ಗೊತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಕಷ್ಟು ಗುಂಪುಗಳಾಗಿವೆ. ಯತ್ನಾಳ್, ಈಶ್ವರಪ್ಪ, ಅಶೋಕ್, ಸಿಟಿ ರವಿ ಎಲ್ಲರೂ ಒಂದೊಂದು ಕಡೆ ಹೋಗುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ, ಜನರ ಕುಂದುಕೊರತೆ, ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೋಬ್ಬರೂ ಮಾತನಾಡುತ್ತಿಲ್ಲ. ಕೇಂದ್ರ ಸರ್ಕಾರದಿಂದ ಬರಬೇಕಾದ ಯೋಜನೆಗಳ ಬಗ್ಗೆಯೂ ಚಿಂತಿಸುತ್ತಿಲ್ಲ. ಎಲ್ಲರೂ ಅವರವರ ವೈಯಕ್ತಿಕ ಅಸ್ತಿತ್ವದ ಬಗ್ಗೆ ಗಮನಹರಿಸಿದ್ದಾರೆ. ಹಾಗೆಯೇ ಪ್ರತಾಪ್ ಸಿಂಹ ಕೂಡ ಅಸ್ತಿತ್ವ ಉಳಿಸಿಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರಿಗೆ ಟಿಕೆಟ್ ನೀಡದೆ ದೂರ ಇಟ್ಟಿರುವುದರಿಂದ ಹೈಲೆಟ್ ಆಗಲು ಕೋರ್ಟ್ಗೆ ಹೋಗಿದ್ದಾರೆ ಎಂದು ಟೀಕಿಸಿದರು.
ಅತಿವೃಷ್ಟಿಯಾಗಿದೆ, ಎಲ್ಲಾ ಜಲಾಶಯಗಳು ತುಂಬಿವೆ. ಜನರು ಕೂಡ ಬಹಳ ಸಂಕಷ್ಟದಲ್ಲಿದ್ದಾರೆ. ರೈತರಿಗೂ ಸಮಸ್ಯೆಯಾಗಿದೆ. ಅದರ ಬಗ್ಗೆ ಯಾರೊಬ್ಬರೂ ಮಾತನಾಡುತ್ತಿಲ್ಲ. ಕೇವಲ ಜನರ ಹಾದಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಭೋಸರಾಜು, ಹಲವು ವರ್ಷಗಳಿಂದ ಈ ಬೇಡಿಕೆ ಇತ್ತು. ಕುರುಬ ಸಮುದಾಯ ಎಲ್ಲೆಲ್ಲಿ ಇದ್ದಾರೆಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಎಲ್ಲಿಯೂ ಗೊಂದಲ ಆಗದ ರೀತಿಯಲ್ಲಿ ಈ ಕಾರ್ಯ ಮಾಡಲಾಗುತ್ತದೆ ಎಂದರು.
ಜಾತಿಗಣತಿಯಲ್ಲಿ ಮತಾಂತರಕ್ಕೂ ಒಂದು ಕಾಲಂ ಇರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಒತ್ತಾಯಪೂರ್ವಕವಾಗಿ ಯಾರನ್ನೂ ಸೇರಿಸಲ್ಲ. ತಾವಾಗಿಯೇ ಆಗುವವರಿಗೆ ಅವಕಾಶ ಇದೆ. ಎಲ್ಲಿ ತಪ್ಪಿದೆ ಎಂದು ಹುಡುಕುವುದೇ ಬಿಜೆಪಿ ಅಜೆಂಡಾ. ಜನರಲ್ಲಿ ಗೊಂದಲ ಸೃಷ್ಟಿ ಮಾಡುವುದು, ಉತ್ತಮ ಆಡಳಿತ ವಿರುದ್ದ ಜನತೆಗೆ ಗೊಂದಲ ಮೂಡಿಸುವುದೇ ಇವರ ಕೆಲಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…