ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ.
ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಒಂದು ಗಂಟೆಗೂ ಅಧಿಕ ಸಮಯ ಮಳೆ ಸುರಿದು ಕಾದ ಭೂಮಿಗೆ ತಂಪೆರಿದಿದೆ.
ಜಿಲ್ಲೆಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣಗೊಂಡು ಬೆಳೆಗಾರರು ಹೂಮಳೆಗಾಗಿ ಕಾತೊರೆಯುತ್ತಿರುವಾಗಲೇ ಮಳೆ ಸುರಿದಿರುವುದು ಸಂತಸ ತಂದಿದೆ.
ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ವಾರ ಒಂದು ಇಂಚಿಗೂ ಅಧಿಕ ಮಳೆ ಸುರಿದಿತ್ತು. ಇಂದು ಕೂಡ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಇಂದು ಸುರಿದ ಮಳೆ ಜನರ ಸಮಸ್ಯೆಯನ್ನು ಬಗೆಹರಿಸದಿದ್ದರೂ ಜನರಲ್ಲಿ ಮುಂದೆ ಉತ್ತಮ ಮಳೆಯಾಗುವ ನಿರೀಕ್ಷೆ ಮೂಡಿಸಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…