ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ.
ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಒಂದು ಗಂಟೆಗೂ ಅಧಿಕ ಸಮಯ ಮಳೆ ಸುರಿದು ಕಾದ ಭೂಮಿಗೆ ತಂಪೆರಿದಿದೆ.
ಜಿಲ್ಲೆಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣಗೊಂಡು ಬೆಳೆಗಾರರು ಹೂಮಳೆಗಾಗಿ ಕಾತೊರೆಯುತ್ತಿರುವಾಗಲೇ ಮಳೆ ಸುರಿದಿರುವುದು ಸಂತಸ ತಂದಿದೆ.
ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ವಾರ ಒಂದು ಇಂಚಿಗೂ ಅಧಿಕ ಮಳೆ ಸುರಿದಿತ್ತು. ಇಂದು ಕೂಡ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಇಂದು ಸುರಿದ ಮಳೆ ಜನರ ಸಮಸ್ಯೆಯನ್ನು ಬಗೆಹರಿಸದಿದ್ದರೂ ಜನರಲ್ಲಿ ಮುಂದೆ ಉತ್ತಮ ಮಳೆಯಾಗುವ ನಿರೀಕ್ಷೆ ಮೂಡಿಸಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…