ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ.
ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಒಂದು ಗಂಟೆಗೂ ಅಧಿಕ ಸಮಯ ಮಳೆ ಸುರಿದು ಕಾದ ಭೂಮಿಗೆ ತಂಪೆರಿದಿದೆ.
ಜಿಲ್ಲೆಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣಗೊಂಡು ಬೆಳೆಗಾರರು ಹೂಮಳೆಗಾಗಿ ಕಾತೊರೆಯುತ್ತಿರುವಾಗಲೇ ಮಳೆ ಸುರಿದಿರುವುದು ಸಂತಸ ತಂದಿದೆ.
ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ವಾರ ಒಂದು ಇಂಚಿಗೂ ಅಧಿಕ ಮಳೆ ಸುರಿದಿತ್ತು. ಇಂದು ಕೂಡ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಇಂದು ಸುರಿದ ಮಳೆ ಜನರ ಸಮಸ್ಯೆಯನ್ನು ಬಗೆಹರಿಸದಿದ್ದರೂ ಜನರಲ್ಲಿ ಮುಂದೆ ಉತ್ತಮ ಮಳೆಯಾಗುವ ನಿರೀಕ್ಷೆ ಮೂಡಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…