ಕೊಡಗು: ಜಲಪಾತದಲ್ಲಿ ಈಜಲೆಂದು ನೀರಿಗಿಳಿದ ಪ್ರವಾಸಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಮುಳಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇಲಾವರ ಜಲಪಾತದಲ್ಲಿ ನಡೆದಿದೆ.
ಕೇರಳ ರಾಜ್ಯದ ಮಟ್ಟನೂರು ನಿವಾಸಿ ರಶೀದ್ (27) ಮೃತ ಯುವಕನಾಗಿದ್ದಾನೆ. ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರು ಮಟ್ಟನೂರಿನಿಂದ ಕೊಡಗಿಗೆ ಪ್ರವಾಸಕ್ಕೆಂದು ಬಂದಿದ್ದು, ಬೆಳಗ್ಗೆ ಚೇಲಾವರ ಜಲಪಾತಕ್ಕೆ ತೆರಳಿದ್ದಾರೆ. ಈ ಸಂದರ್ಭ ರಶೀದ್ ಜಲಪಾತದಲ್ಲಿ ಈಜಲೆಂದು ನೀರಿಗಿಳಿದಿದ್ದು, ಈಜು ಬಾರದ ರಶೀದ್ ನೀರಿನಲ್ಲಿ ಸಿಲುಕಿ ಮುಳುಗಿ ಸಾವನಪ್ಪಿದ್ದಾನೆ.
ಯುವಕ ನೀರಿನಲ್ಲಿ ಮುಳಗುತ್ತಿದ್ದಂತೆ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಲಾಯಿತಾದರೂ, ರಶೀದ್ನನ್ನು ಬದುಕಿಸಲಾಗಲಿಲ್ಲ. ಬಳಿಕ ಸ್ಥಳೀಯ ಈಜುಪಟುಗಳು ಹಾಗೂ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…