ಕೊಡಗು: ಜಲಪಾತದಲ್ಲಿ ಈಜಲೆಂದು ನೀರಿಗಿಳಿದ ಪ್ರವಾಸಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಮುಳಗಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇಲಾವರ ಜಲಪಾತದಲ್ಲಿ ನಡೆದಿದೆ.
ಕೇರಳ ರಾಜ್ಯದ ಮಟ್ಟನೂರು ನಿವಾಸಿ ರಶೀದ್ (27) ಮೃತ ಯುವಕನಾಗಿದ್ದಾನೆ. ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರು ಮಟ್ಟನೂರಿನಿಂದ ಕೊಡಗಿಗೆ ಪ್ರವಾಸಕ್ಕೆಂದು ಬಂದಿದ್ದು, ಬೆಳಗ್ಗೆ ಚೇಲಾವರ ಜಲಪಾತಕ್ಕೆ ತೆರಳಿದ್ದಾರೆ. ಈ ಸಂದರ್ಭ ರಶೀದ್ ಜಲಪಾತದಲ್ಲಿ ಈಜಲೆಂದು ನೀರಿಗಿಳಿದಿದ್ದು, ಈಜು ಬಾರದ ರಶೀದ್ ನೀರಿನಲ್ಲಿ ಸಿಲುಕಿ ಮುಳುಗಿ ಸಾವನಪ್ಪಿದ್ದಾನೆ.
ಯುವಕ ನೀರಿನಲ್ಲಿ ಮುಳಗುತ್ತಿದ್ದಂತೆ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಲಾಯಿತಾದರೂ, ರಶೀದ್ನನ್ನು ಬದುಕಿಸಲಾಗಲಿಲ್ಲ. ಬಳಿಕ ಸ್ಥಳೀಯ ಈಜುಪಟುಗಳು ಹಾಗೂ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…