ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಇಂದು ರಜೆ ಘೋಷಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಧ್ಯಾಹ್ನದ ವೇಳೆ ದೇವಪ್ಪ ಕೆಲಸದ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಅರೆಕಾಡು ಗ್ರಾಮದ ಬಳಿ ತೆರಳಿದ್ದರು. ಈ ವೇಳೆ ಕಾಡಾನೆಯೊಂದು ದಾಳಿ ನಡೆಸಿದ್ದು ದೇವಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು ಈ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದಿದ್ದ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಜನರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಾಚರಣೆ ನಡೆಸಿದ್ದಾರೆ. ಇದರಿಂದಾಗಿ ಟ್ರ್ಯಾಕ್ಟರ್ ಚಾಲಕನ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು. ಸದ್ಯ ಈಗ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…
ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…
ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್ಪಾತ್ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…