ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ವಾಹನ ಜಖಂಗೊಂಡಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದ ನ್ಯಾಯಾಲಯ ಸಂಪರ್ಕ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಜೋಡುಬೀಟಿ ನಿವಾಸಿಯೊಬ್ಬರು ತಮ್ಮ ಜೀಪಿನಲ್ಲಿ ಸಂಚರಿಸುತ್ತಿದ್ದ ವೇಳೆ, ಜೂನಿಯರ್ ಕಾಲೇಜು ಆವರಣದಲ್ಲಿದ್ದ ಒಣಗಿದ ಮರದ ಕೊಂಬೆ ಗಾಳಿ-ಮಳೆಗೆ ಏಕಾಏಕಿ ಮುರಿದು ವಾಹನದ ಮೇಲೆ ಬಿದ್ದಿದೆ. ಪರಿಣಾಮ ಜೀಪಿನ ಮುಂಭಾಗದ ಗಾಜು ಸಂಪೂರ್ಣ ಪುಡಿಯಾಗಿದ್ದು, ವಾಹನಕ್ಕೆ ಹಾನಿಯಾಗಿದೆ.
ಘಟನೆಯ ವೇಳೆ ಕೊಂಬೆ ನೇರವಾಗಿ ವಾಹನದ ಕ್ಯಾಬಿನ್ ಮೇಲೆ ಬಿದ್ದಿದ್ದರೂ, ಚಾಲಕ ಹಾಗೂ ಇತರ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿರುವುದು ನೆರೆದಿದ್ದವರಲ್ಲಿ ನಿಟ್ಟುಸಿರು ಬಿಡುವಂತಾಗಿದೆ.
ಘಟನೆ ನಡೆದಿರುವ ರಸ್ತೆ ನ್ಯಾಯಾಲಯ, ಜೂನಿಯರ್ ಕಾಲೇಜು ಹಾಗೂ ಟರ್ಫ್ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಪ್ರತಿನಿತ್ಯ ನೂರಾರು ಜನರು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆದ್ದರಿಂದ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಮತ್ತು ಒಣ ಕೊಂಬೆಗಳನ್ನು ಕೂಡಲೇ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…