ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಸಾಧಿಕ್ ಹಾಗೂ ಅಬ್ದುಲ್ ಅಹಮ್ಮದ್ ತಂಜಲ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು ತಳಿಪರಂಬಾದಿಂದ ಬಂದು ಪಿರಿಯಾಪಟ್ಟಣ ತಾಲ್ಲೂಕಿನ ವಿವಿಧೆಡೆ ದನ ಕರುಗಳನ್ನು ಖರೀದಿಸಿ ನಡುರಾತ್ರಿ ಸಾಗಿಸುತ್ತಿದ್ದರು. ರಾಸುಗಳನ್ನು ತುಂಬಿಸಿಕೊಂಡು ಅನುಮಾನ ಬರದಂತೆ ಆಲೂಗೆಡ್ಡೆ ಮೂಟೆಗಳನ್ನು ತುಂಬಿಸಿದ್ದರು.
ಲಾರಿ ಹೊರಡುತ್ತಿದ್ದ ವಿಷಯ ತಿಳಿದ ಗೋರಕ್ಷಕರು ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರದ ಬಳಿ ಕಾಯುತ್ತಿದ್ದರು. ಮುಂಜಾನೆ ಲಾರಿ ತಪಾಸಣೆ ಕೇಂದ್ರದ ಬಳಿ ಬರುತ್ತಿದ್ದಂತೆ ಲಾರಿ ಪರಿಶೀಲಿಸಿದ್ದಾರೆ. ಈ ವೇಳೆ 10ಕ್ಕೂ ಹೆಚ್ಚು ಗೋವುಗಳು ಪತ್ತೆಯಾಗಿವೆ. ವಿರಾಜಪೇಟೆ ನಗರ ಠಾಣಾಧಿಕಾರಿ ಪ್ರಮೋದ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಲಾರಿ ಮತ್ತು ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…