ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಇನ್ನೂರು ತಳಿಪರಂಬಾ ನಿವಾಸಿ ಸಾಧಿಕ್ ಹಾಗೂ ಅಬ್ದುಲ್ ಅಹಮ್ಮದ್ ತಂಜಲ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರು ತಳಿಪರಂಬಾದಿಂದ ಬಂದು ಪಿರಿಯಾಪಟ್ಟಣ ತಾಲ್ಲೂಕಿನ ವಿವಿಧೆಡೆ ದನ ಕರುಗಳನ್ನು ಖರೀದಿಸಿ ನಡುರಾತ್ರಿ ಸಾಗಿಸುತ್ತಿದ್ದರು. ರಾಸುಗಳನ್ನು ತುಂಬಿಸಿಕೊಂಡು ಅನುಮಾನ ಬರದಂತೆ ಆಲೂಗೆಡ್ಡೆ ಮೂಟೆಗಳನ್ನು ತುಂಬಿಸಿದ್ದರು.
ಲಾರಿ ಹೊರಡುತ್ತಿದ್ದ ವಿಷಯ ತಿಳಿದ ಗೋರಕ್ಷಕರು ಪೆರುಂಬಾಡಿ ಪೊಲೀಸ್ ತಪಾಸಣೆ ಕೇಂದ್ರದ ಬಳಿ ಕಾಯುತ್ತಿದ್ದರು. ಮುಂಜಾನೆ ಲಾರಿ ತಪಾಸಣೆ ಕೇಂದ್ರದ ಬಳಿ ಬರುತ್ತಿದ್ದಂತೆ ಲಾರಿ ಪರಿಶೀಲಿಸಿದ್ದಾರೆ. ಈ ವೇಳೆ 10ಕ್ಕೂ ಹೆಚ್ಚು ಗೋವುಗಳು ಪತ್ತೆಯಾಗಿವೆ. ವಿರಾಜಪೇಟೆ ನಗರ ಠಾಣಾಧಿಕಾರಿ ಪ್ರಮೋದ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಲಾರಿ ಮತ್ತು ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…