ಕೊಡಗು

ಸಮುದ್ರದಲ್ಲಿ ಆಟವಾಡುವಾಗ ನೀರಿನಲ್ಲಿ ಕೊಚ್ಚಿಹೋದ ಇಬ್ಬರು ಬಾಲಕಿಯರು : ಓರ್ವ ಬಾಲಕಿ ಸಾವು

ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ ಯಶಸ್ವಿನಿಯನ್ನು (16) ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಶಸ್ವಿನಿ ನೀಡಿದ ಮಾಹಿತಿ ಪ್ರಕಾರ ಅವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ (ಪಿಸಿಎಂಬಿ) ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು. ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಸಾಥ್‌ ನೀಡಿದ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಇಬ್ಬರು ನಾಪತ್ತೆಯಾದ ಬಗ್ಗೆ ಮಡಿಕೇರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಗೊಂಡಿತ್ತು. ಆದರೆ ಇವರಿಬ್ಬರೂ ಮನೆ ಬಿಟ್ಟು ಮಂಗಳೂರು ಕಡೆಗೆ ಹೊರಟವರು ಪಣಂಬೂರು ಬೀಚ್ ನಲ್ಲಿ ಆಟವಾಡಿ ಬಳಿಕ ಬಸ್ ಹತ್ತಿಕೊಂಡು ಮುಸ್ಸಂಜೆ ವೇಳೆ ಮಲ್ಪೆ ಬೀಚಿಗೆ ಬಂದಿದ್ದಾರೆ.

ರಾತ್ರಿ ವೇಳೆ ಮಲ್ಪೆ ಬೀಚಿನಲ್ಲಿ ಆಟ ಆಡುತ್ತಿದ್ದ ವೇಳೆ ಅಬ್ಬರದ ಅಲೆಗಳಿಗೆ ಸಿಲುಕಿ ಇವರಿಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆ ಎನ್ನಲಾಗಿದೆ. ಇವರನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ. ಈ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಳು ಎಂದು ತಿಳಿದುಬಂದಿದೆ.

lokesh

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

12 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

19 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

23 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

27 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

31 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

38 mins ago