ಕೊಡಗು

ಸಮುದ್ರದಲ್ಲಿ ಆಟವಾಡುವಾಗ ನೀರಿನಲ್ಲಿ ಕೊಚ್ಚಿಹೋದ ಇಬ್ಬರು ಬಾಲಕಿಯರು : ಓರ್ವ ಬಾಲಕಿ ಸಾವು

ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ ಯಶಸ್ವಿನಿಯನ್ನು (16) ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಶಸ್ವಿನಿ ನೀಡಿದ ಮಾಹಿತಿ ಪ್ರಕಾರ ಅವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ (ಪಿಸಿಎಂಬಿ) ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು. ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಸಾಥ್‌ ನೀಡಿದ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಇಬ್ಬರು ನಾಪತ್ತೆಯಾದ ಬಗ್ಗೆ ಮಡಿಕೇರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಗೊಂಡಿತ್ತು. ಆದರೆ ಇವರಿಬ್ಬರೂ ಮನೆ ಬಿಟ್ಟು ಮಂಗಳೂರು ಕಡೆಗೆ ಹೊರಟವರು ಪಣಂಬೂರು ಬೀಚ್ ನಲ್ಲಿ ಆಟವಾಡಿ ಬಳಿಕ ಬಸ್ ಹತ್ತಿಕೊಂಡು ಮುಸ್ಸಂಜೆ ವೇಳೆ ಮಲ್ಪೆ ಬೀಚಿಗೆ ಬಂದಿದ್ದಾರೆ.

ರಾತ್ರಿ ವೇಳೆ ಮಲ್ಪೆ ಬೀಚಿನಲ್ಲಿ ಆಟ ಆಡುತ್ತಿದ್ದ ವೇಳೆ ಅಬ್ಬರದ ಅಲೆಗಳಿಗೆ ಸಿಲುಕಿ ಇವರಿಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆ ಎನ್ನಲಾಗಿದೆ. ಇವರನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ. ಈ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಳು ಎಂದು ತಿಳಿದುಬಂದಿದೆ.

lokesh

Recent Posts

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

14 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

2 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

19 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

22 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

24 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

24 hours ago