ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ ಯಶಸ್ವಿನಿಯನ್ನು (16) ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಶಸ್ವಿನಿ ನೀಡಿದ ಮಾಹಿತಿ ಪ್ರಕಾರ ಅವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ (ಪಿಸಿಎಂಬಿ) ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು. ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಸಾಥ್ ನೀಡಿದ ವಿಚಾರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.
ಇಬ್ಬರು ನಾಪತ್ತೆಯಾದ ಬಗ್ಗೆ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಗೊಂಡಿತ್ತು. ಆದರೆ ಇವರಿಬ್ಬರೂ ಮನೆ ಬಿಟ್ಟು ಮಂಗಳೂರು ಕಡೆಗೆ ಹೊರಟವರು ಪಣಂಬೂರು ಬೀಚ್ ನಲ್ಲಿ ಆಟವಾಡಿ ಬಳಿಕ ಬಸ್ ಹತ್ತಿಕೊಂಡು ಮುಸ್ಸಂಜೆ ವೇಳೆ ಮಲ್ಪೆ ಬೀಚಿಗೆ ಬಂದಿದ್ದಾರೆ.
ರಾತ್ರಿ ವೇಳೆ ಮಲ್ಪೆ ಬೀಚಿನಲ್ಲಿ ಆಟ ಆಡುತ್ತಿದ್ದ ವೇಳೆ ಅಬ್ಬರದ ಅಲೆಗಳಿಗೆ ಸಿಲುಕಿ ಇವರಿಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆ ಎನ್ನಲಾಗಿದೆ. ಇವರನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದಾರೆ. ಈ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಾನ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಳು ಎಂದು ತಿಳಿದುಬಂದಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…