ಕೊಡಗು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಂಜು ಹಾಗೂ ರಕ್ಷಿತ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಸುಂಟಿಕೊಪ್ಪ ಹಾಗೂ ಗರಗಂದೂರು ಗ್ರಾಮದವರು ಎಂದು ತಿಳಿದು ಬಂದಿದೆ.
ಕುಶಾಲನಗರದ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇನ್ನೂ ಮೃತ ಶವಗಳನ್ನು ಕುಶಾಲನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…