raod police kodagu
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ.
ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಈ ರಸ್ತೆಯಲ್ಲಿ ವಾಹನ ಸವಾರರು ತೆರಳಲು ಹೆಣಗಾಡುವ ಸ್ಥಿತಿಯನ್ನು ಅಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ಸುನೀತ್ರವರು ಮನಗಂಡು ರಸ್ತೆಯ ಪಕ್ಕದಲ್ಲೇ ಇದ್ದ ಕಲ್ಲುಗಳನ್ನ ತಂದು ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಗಳಿಗೆ ಹಾಕಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ.
ಇವರ ಈ ಒಂದು ಸಮಾಜ ಸೇವೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಕಾನ್ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ.
ಮಡಿಕೇರಿ ಸಂಚಾರಿ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸುನೀತ್ರವರು ಈ ಹಿಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ಸದ್ಯ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…