raod police kodagu
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ.
ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಈ ರಸ್ತೆಯಲ್ಲಿ ವಾಹನ ಸವಾರರು ತೆರಳಲು ಹೆಣಗಾಡುವ ಸ್ಥಿತಿಯನ್ನು ಅಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್ಸ್ಟೇಬಲ್ ಸುನೀತ್ರವರು ಮನಗಂಡು ರಸ್ತೆಯ ಪಕ್ಕದಲ್ಲೇ ಇದ್ದ ಕಲ್ಲುಗಳನ್ನ ತಂದು ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಗಳಿಗೆ ಹಾಕಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ.
ಇವರ ಈ ಒಂದು ಸಮಾಜ ಸೇವೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಕಾನ್ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ.
ಮಡಿಕೇರಿ ಸಂಚಾರಿ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಸುನೀತ್ರವರು ಈ ಹಿಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ಸದ್ಯ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…