ಕೊಡಗು

ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಕಾನ್ಸ್‌ಟೇಬಲ್‌: ವಿಡಿಯೋ ವೈರಲ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ.

ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈ ರಸ್ತೆಯಲ್ಲಿ ವಾಹನ ಸವಾರರು ತೆರಳಲು ಹೆಣಗಾಡುವ ಸ್ಥಿತಿಯನ್ನು ಅಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್ ಸುನೀತ್‌ರವರು ಮನಗಂಡು ರಸ್ತೆಯ ಪಕ್ಕದಲ್ಲೇ ಇದ್ದ ಕಲ್ಲುಗಳನ್ನ ತಂದು ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಗಳಿಗೆ ಹಾಕಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ.

ಇವರ ಈ ಒಂದು ಸಮಾಜ ಸೇವೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸ್ ಕಾನ್ಸ್‌ಟೇಬಲ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ. ‌

ಮಡಿಕೇರಿ ಸಂಚಾರಿ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿರುವ ಸುನೀತ್‌ರವರು ಈ ಹಿಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು ಸದ್ಯ ಇದೀಗ ಪೊಲೀಸ್ ಇಲಾಖೆಯಲ್ಲಿ ಸೇವೆಯಲ್ಲಿದ್ದಾರೆ‌.‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago