ಕೊಡಗು

ವಿರಾಜಪೇಟೆ | ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ದಸಂಸ ಒತ್ತಾಯ

ವಿರಾಜಪೇಟೆ : ಶ್ರೀಮಂಗಲ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ವರ್ಗಾಹಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೂಗುತ್ತಿಗೆ ಹೋರಾಟ ಸಮಿತಿಯ ಸಂಚಾಲಕ ಮತ್ತು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೃಷ್ಣಪ್ಪ, ಶ್ರೀಮಂಗಲ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಲಿತರ, ಪರಿಶಿಷ್ಟ ವರ್ಗದವರಿಗೆ ರಕ್ಷಣೆ ಹಾಗೂ ಸೂಕ್ತ ನ್ಯಾಯ ಒದಗಿಸದೆ ಉಡಾಪೆಯಿಂದ ನಡೆದುಕೊಳ್ಳುತ್ತಿರುವ ಶ್ರೀಮಂಗಲ ಠಾಣಾಧಿಕಾರಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರನ್ನು ತಕ್ಷಣ ವಗಾಹಿಸುವಂತೆ ಆಗ್ರಹಿಸಿದರು.

ಜು.೧೫ ರಂದು ಪರಿಶಿಷ್ಠ ಪಂಗಡದ ಮಣಿ ಎಂಬಾತ ತನ್ನ ಮೇಲೆ ನಡೆದ ಹಲ್ಲೆ ಕುರಿತು ಶ್ರೀಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜು.೧೬ರಂದು ಠಾಣಾಽಕಾರಿ ಇವರನ್ನು ಕರೆಯಿತಿ ತಾವು ಹೇಳಿದಂತೆ ಹೇಳಿಕೆ ನೀಡುವಂತೆ ಒತ್ತಾಯಿಸಿ ಹೇಳಿಕೆ ಪಡೆದು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈ ರೀತಿಯ ಪ್ರಕರಣ ಇಲ್ಲಿ ಹೆಚ್ಚಾಗಿದೆ ಎಂದು ದೂರಿದರು.

ಇತ್ತಿಚೆಗೆ ನಮ್ಮ ಸಮಿತಿಯ ಕಾರ್ಯಕರ್ತರು ಶ್ರೀಮಂಗಲ ಠಾಣೆಗೆ ಹೋದಾಗ ಅಲ್ಲಿದ್ದ ಆ ಭಾಗದ ಪೊಲೀಸ್ ವೃತ್ತ ನಿರೀಕ್ಷಕರು ಬಾಯಿಗೆ ಬಂದಂತೆ ಮಾತನಾಡಿ, ನಾನು ಈ ಭಾಗಕ್ಕೆ ಬಂದಿರುವುದೆ ನಿಮ್ಮಂತ ಸಂಘಟನೆ ಮಟ್ಟ ಹಾಕಲು ಎಂಬ ಮಾತನಾಡಿದ್ದು ಸರಿಯಲ್ಲ. ಈ ಇಬ್ಬರು ಅಽಕಾರಿಗಳೂ ವಿರಾಜಪೇಟೆ ಭಾಗದಲ್ಲಿ ಕರ್ತವ್ಯ ನಿರ್ವಹಿಸಿ ಇಲ್ಲಿಗೆ ಬಂದವರು. ಇವರಿಬ್ಬರ ವರ್ಗಕ್ಕೆ ಶಾಸಕರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು.

ದಲಿತ ರೈಟ್ಸ್ ಮೂಮೆಂಟ್ಸ್‌ನ ರಾಜ್ಯ ಉಪಾಧ್ಯಕ್ಷ ರಮೇಶ್ ಮಾಯಮುಡಿ ಮಾತನಾಡಿ, ಪೊಲೀಸ್ ವೃತ್ತ ನಿರೀಕ್ಷಕರಿಗೆ ದಲಿತ ಸಂಘರ್ಷ ಸಮಿತಿ ಮಟ್ಟ ಹಾಕುವ ಕೆಲಸ ಬೇಡ. ಅವರು ದಲಿತರಿಗೆ, ಪರಿಶಿಷ್ಟ ವರ್ಗದ ಜನರಿಗೆ ರಕ್ಷಣೆ ಹಾಗೂ ನ್ಯಾಯ ಒದಗಿಸುವ ಕರ್ತವ್ಯ ಮಾಡಲಿ. ಇದೇ ರೀತಿ ಧೋರಣೆ ತೋರಿದರೆ ಉಗ್ರ ಹೋರಾಟ ಅನಿವಾರ್ಯ. ಇವರನ್ನು ತಕ್ಷಣ ಶಾಸಕರು ಇಲ್ಲಿಂದ ವರ್ಗಹಿಸಬೇಕಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಜನಿಕಾಂತ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಮುಖಂಡರಾದ ಎ ಮಹದೇವ, ದಲಿತ ಸಂಘರ್ಷ ಸಮಿತಿಯ ಮುಖಂಡ ಹೆಚ್.ಬಿ. ಸತೀಶ್, ಜಿಲ್ಲಾ ಸಂಘಟನಾ ಸಂಚಾಲಕ ಶಿವಣ್ಣ, ನಾಗೇಶ್, ದಲಿತ ಮುಖಂಡ ಶಿವಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

3 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

7 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

7 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

7 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

7 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

8 hours ago