ಕೊಡಗು

ವಿರಾಜಪೇಟೆ | ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ದಸಂಸ ಒತ್ತಾಯ

ವಿರಾಜಪೇಟೆ : ಶ್ರೀಮಂಗಲ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಅಧಿಕಾರಿಗಳನ್ನು ತಕ್ಷಣ ವರ್ಗಾಹಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೂಗುತ್ತಿಗೆ ಹೋರಾಟ ಸಮಿತಿಯ ಸಂಚಾಲಕ ಮತ್ತು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೃಷ್ಣಪ್ಪ, ಶ್ರೀಮಂಗಲ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದಲಿತರ, ಪರಿಶಿಷ್ಟ ವರ್ಗದವರಿಗೆ ರಕ್ಷಣೆ ಹಾಗೂ ಸೂಕ್ತ ನ್ಯಾಯ ಒದಗಿಸದೆ ಉಡಾಪೆಯಿಂದ ನಡೆದುಕೊಳ್ಳುತ್ತಿರುವ ಶ್ರೀಮಂಗಲ ಠಾಣಾಧಿಕಾರಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರನ್ನು ತಕ್ಷಣ ವಗಾಹಿಸುವಂತೆ ಆಗ್ರಹಿಸಿದರು.

ಜು.೧೫ ರಂದು ಪರಿಶಿಷ್ಠ ಪಂಗಡದ ಮಣಿ ಎಂಬಾತ ತನ್ನ ಮೇಲೆ ನಡೆದ ಹಲ್ಲೆ ಕುರಿತು ಶ್ರೀಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜು.೧೬ರಂದು ಠಾಣಾಽಕಾರಿ ಇವರನ್ನು ಕರೆಯಿತಿ ತಾವು ಹೇಳಿದಂತೆ ಹೇಳಿಕೆ ನೀಡುವಂತೆ ಒತ್ತಾಯಿಸಿ ಹೇಳಿಕೆ ಪಡೆದು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈ ರೀತಿಯ ಪ್ರಕರಣ ಇಲ್ಲಿ ಹೆಚ್ಚಾಗಿದೆ ಎಂದು ದೂರಿದರು.

ಇತ್ತಿಚೆಗೆ ನಮ್ಮ ಸಮಿತಿಯ ಕಾರ್ಯಕರ್ತರು ಶ್ರೀಮಂಗಲ ಠಾಣೆಗೆ ಹೋದಾಗ ಅಲ್ಲಿದ್ದ ಆ ಭಾಗದ ಪೊಲೀಸ್ ವೃತ್ತ ನಿರೀಕ್ಷಕರು ಬಾಯಿಗೆ ಬಂದಂತೆ ಮಾತನಾಡಿ, ನಾನು ಈ ಭಾಗಕ್ಕೆ ಬಂದಿರುವುದೆ ನಿಮ್ಮಂತ ಸಂಘಟನೆ ಮಟ್ಟ ಹಾಕಲು ಎಂಬ ಮಾತನಾಡಿದ್ದು ಸರಿಯಲ್ಲ. ಈ ಇಬ್ಬರು ಅಽಕಾರಿಗಳೂ ವಿರಾಜಪೇಟೆ ಭಾಗದಲ್ಲಿ ಕರ್ತವ್ಯ ನಿರ್ವಹಿಸಿ ಇಲ್ಲಿಗೆ ಬಂದವರು. ಇವರಿಬ್ಬರ ವರ್ಗಕ್ಕೆ ಶಾಸಕರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು.

ದಲಿತ ರೈಟ್ಸ್ ಮೂಮೆಂಟ್ಸ್‌ನ ರಾಜ್ಯ ಉಪಾಧ್ಯಕ್ಷ ರಮೇಶ್ ಮಾಯಮುಡಿ ಮಾತನಾಡಿ, ಪೊಲೀಸ್ ವೃತ್ತ ನಿರೀಕ್ಷಕರಿಗೆ ದಲಿತ ಸಂಘರ್ಷ ಸಮಿತಿ ಮಟ್ಟ ಹಾಕುವ ಕೆಲಸ ಬೇಡ. ಅವರು ದಲಿತರಿಗೆ, ಪರಿಶಿಷ್ಟ ವರ್ಗದ ಜನರಿಗೆ ರಕ್ಷಣೆ ಹಾಗೂ ನ್ಯಾಯ ಒದಗಿಸುವ ಕರ್ತವ್ಯ ಮಾಡಲಿ. ಇದೇ ರೀತಿ ಧೋರಣೆ ತೋರಿದರೆ ಉಗ್ರ ಹೋರಾಟ ಅನಿವಾರ್ಯ. ಇವರನ್ನು ತಕ್ಷಣ ಶಾಸಕರು ಇಲ್ಲಿಂದ ವರ್ಗಹಿಸಬೇಕಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಜನಿಕಾಂತ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಮುಖಂಡರಾದ ಎ ಮಹದೇವ, ದಲಿತ ಸಂಘರ್ಷ ಸಮಿತಿಯ ಮುಖಂಡ ಹೆಚ್.ಬಿ. ಸತೀಶ್, ಜಿಲ್ಲಾ ಸಂಘಟನಾ ಸಂಚಾಲಕ ಶಿವಣ್ಣ, ನಾಗೇಶ್, ದಲಿತ ಮುಖಂಡ ಶಿವಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

13 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

14 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

14 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

14 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

16 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

16 hours ago