ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.
ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ ಪ್ರದೇಶದಿಂದ ದೂರವಾಗಿರುವ ಕಾರಣ ತಜ್ಞರು ಬರಲು ಹಿಂದೇಟು ಹಾಕಿದ್ದಾರೆ. ಜಿತನ್ ಅವರು ಸ್ನೇಹಿತರ ಸಹಾಯದಿಂದ ವಿರಾಜಪೇಟೆ ನಗರದ ಆಟೋ ಚಾಲಕ ಸತೀಶ್ ಅವರನ್ನು ಸಂಪರ್ಕಿಸಿದಾಗ ಸತೀಶ್ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.
ಮನೆಯ ಕೋಣೆಯೊಂದರಲ್ಲಿ ಅವಿತುಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಪತ್ತೆಹಚ್ಚಿ ಸುಮಾರು ಮೂರು ತಾಸುಗಳ ಅವಿರತ ಸಾಹಸದಿಂದ ಚೀಲದಲ್ಲಿ ಸೇರಿಸುವಲ್ಲಿ ಸಫಲರಾಗಿದ್ದಾರೆ. ಸರ್ಪವು ಸುಮಾರು ೧೨ ಅಡಿ ಉದ್ದವಿದ್ದು, ೦೯-೧೦ ಕೆ.ಜಿ ತೂಕವಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸತೀಶ್ ಮಾಹಿತಿ ನೀಡಿದರು.
ಮಾಕೂಟ್ಟ ಅಭಯಾರಣ್ಯಕ್ಕೆ ತೆರಳಿ ಸರ್ಪವನ್ನು ಕಾಡಿಗೆ ಬಿಡಲಾಯಿತು.
ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ…
ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ…
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister…
ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ…
ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು…
ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಗ್ರಾಹಕರಿಗೆ ಅಡಚಣೆ ರಹಿತವಾದ…