ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.
ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ ಪ್ರದೇಶದಿಂದ ದೂರವಾಗಿರುವ ಕಾರಣ ತಜ್ಞರು ಬರಲು ಹಿಂದೇಟು ಹಾಕಿದ್ದಾರೆ. ಜಿತನ್ ಅವರು ಸ್ನೇಹಿತರ ಸಹಾಯದಿಂದ ವಿರಾಜಪೇಟೆ ನಗರದ ಆಟೋ ಚಾಲಕ ಸತೀಶ್ ಅವರನ್ನು ಸಂಪರ್ಕಿಸಿದಾಗ ಸತೀಶ್ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.
ಮನೆಯ ಕೋಣೆಯೊಂದರಲ್ಲಿ ಅವಿತುಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಪತ್ತೆಹಚ್ಚಿ ಸುಮಾರು ಮೂರು ತಾಸುಗಳ ಅವಿರತ ಸಾಹಸದಿಂದ ಚೀಲದಲ್ಲಿ ಸೇರಿಸುವಲ್ಲಿ ಸಫಲರಾಗಿದ್ದಾರೆ. ಸರ್ಪವು ಸುಮಾರು ೧೨ ಅಡಿ ಉದ್ದವಿದ್ದು, ೦೯-೧೦ ಕೆ.ಜಿ ತೂಕವಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸತೀಶ್ ಮಾಹಿತಿ ನೀಡಿದರು.
ಮಾಕೂಟ್ಟ ಅಭಯಾರಣ್ಯಕ್ಕೆ ತೆರಳಿ ಸರ್ಪವನ್ನು ಕಾಡಿಗೆ ಬಿಡಲಾಯಿತು.
ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…