ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.
ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ ಪ್ರದೇಶದಿಂದ ದೂರವಾಗಿರುವ ಕಾರಣ ತಜ್ಞರು ಬರಲು ಹಿಂದೇಟು ಹಾಕಿದ್ದಾರೆ. ಜಿತನ್ ಅವರು ಸ್ನೇಹಿತರ ಸಹಾಯದಿಂದ ವಿರಾಜಪೇಟೆ ನಗರದ ಆಟೋ ಚಾಲಕ ಸತೀಶ್ ಅವರನ್ನು ಸಂಪರ್ಕಿಸಿದಾಗ ಸತೀಶ್ ಕೂಡಲೇ ಸ್ಥಳಕ್ಕಾಗಲಿಸಿದ್ದಾರೆ.
ಮನೆಯ ಕೋಣೆಯೊಂದರಲ್ಲಿ ಅವಿತುಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಪತ್ತೆಹಚ್ಚಿ ಸುಮಾರು ಮೂರು ತಾಸುಗಳ ಅವಿರತ ಸಾಹಸದಿಂದ ಚೀಲದಲ್ಲಿ ಸೇರಿಸುವಲ್ಲಿ ಸಫಲರಾಗಿದ್ದಾರೆ. ಸರ್ಪವು ಸುಮಾರು ೧೨ ಅಡಿ ಉದ್ದವಿದ್ದು, ೦೯-೧೦ ಕೆ.ಜಿ ತೂಕವಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸತೀಶ್ ಮಾಹಿತಿ ನೀಡಿದರು.
ಮಾಕೂಟ್ಟ ಅಭಯಾರಣ್ಯಕ್ಕೆ ತೆರಳಿ ಸರ್ಪವನ್ನು ಕಾಡಿಗೆ ಬಿಡಲಾಯಿತು.
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…