ಕೊಡಗು

ವಿರಾಜಪೇಟೆ: ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಣೆ

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ.

ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ ಪೂವಯ್ಯ ನೇತೃತ್ವದ ತಂಡ, ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿರತೆಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಾಗರಹೊಳೆ ಅರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಇದನ್ನೂ ಓದಿ:- ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಚಿರತೆ ರಕ್ಷಣೆ ಕಾರ್ಯಾಚರಣೆಯಲ್ಲಿ ಪಶುವೈದ್ಯ ರಮೇಶ್, ಎಸಿಎಫ್ ಗೋಪಾಲ್, ಆರ್‌ಎಫ್‌ಓ ಶಿವರಾಮ್, ಅರವಳಿಕೆ ತಜ್ಞ ರಂಜನ್ ಹಾಗೂ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

4 mins ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

30 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

1 hour ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

2 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

6 hours ago