ಕೊಡಗು

ವಿರಾಜಪೇಟೆ: ತಂತಿ ಬೇಲಿಗೆ ಸಿಲುಕಿದ್ದ ಚಿರತೆ ರಕ್ಷಣೆ

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ.

ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ ಪೂವಯ್ಯ ನೇತೃತ್ವದ ತಂಡ, ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿರತೆಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಾಗರಹೊಳೆ ಅರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಇದನ್ನೂ ಓದಿ:- ಟ್ರಾಫಿಕ್‌ ಪೊಲೀಸರ ಯಡವಟ್ಟಿಗೆ ಮಗು ಸಾವು ಕೇಸ್: ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಚಿರತೆ ರಕ್ಷಣೆ ಕಾರ್ಯಾಚರಣೆಯಲ್ಲಿ ಪಶುವೈದ್ಯ ರಮೇಶ್, ಎಸಿಎಫ್ ಗೋಪಾಲ್, ಆರ್‌ಎಫ್‌ಓ ಶಿವರಾಮ್, ಅರವಳಿಕೆ ತಜ್ಞ ರಂಜನ್ ಹಾಗೂ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

9 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

9 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

10 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

10 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

10 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

10 hours ago