ವಿರಾಜಪೇಟೆ : ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಬ್ಯೂಟಿಪಾರ್ಲರ್ನೊಂದಿಗೆ ಪರವಾನಿಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತ್ತಿದ್ದುದಲ್ಲದೆ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಿ.ಪಿ. ಪ್ರದೀಪನ್(೪೮) ಮತ್ತು ಕಲೇಶ್ಕುಮಾರ್(೪೫), ಶಾಜಿ(೩೮), ವಿರಾಜಪೇಟೆ ಅಮ್ಮತ್ತಿ ಗ್ರಾಮದ ನೆಲ್ಲಮಕ್ಕಡ ಎ ಪೊನ್ನಣ್ಣ(೪೮) ಬಂಧಿತ ಆರೋಪಿಗಳು.
ವಿರಾಜಪೇಟೆ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಖಾಸಗಿ ಕಟ್ಟಡದಲ್ಲಿ ಪ್ರದೀಪನ್ ಮತ್ತು ಶಿಜು ಎಂಬುವವರು ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಎಂಬ ಮಳಿಗೆ ನಡೆಸುತ್ತಿದ್ದರು. ಇಲ್ಲಿ ಸುಮಾರು ೬ ತಿಂಗಳುಗಳಿಂದ ಹೊರ ರಾಜ್ಯಗಳ ಐಷಾರಾಮಿ ವಾಹನಗಳು ಬಂದು ನಿಲುಗಡೆಗೊಂಡು ಮರಳುತ್ತಿದ್ದು, ವೇಶ್ಯವಾಟಿಕೆಯು ಚಟುವಟಿಕೆಗಳು ನಡೆಯುತ್ತಿದೆ ಎಂಬುದಾಗಿ ಸ್ಥಳೀಯರಲ್ಲಿ ಸಂಶಯ ಮೂಡಿತ್ತು.
ಈ ಸಂಬಂಧ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಪರವಾನಿಗೆ ಪಡೆದು ಅಕ್ರಮವಾಗಿ ಸ್ಪಾ, ಮಸಾಜ್ ಸೆಂಟರ್ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೆ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…