ಕೊಡಗು

ವಿರಾಜಪೇಟೆ ಪುರಸಭೆ ಕಾಂಗ್ರೆಸ್‌ ತೆಕ್ಕೆಗೆ

ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್‌ ಗದ್ದುಗೆ ಏರಿ ದಾಖಲೆ ಮಾಡಿದೆ.

ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಫೌಝಿಯಾ ತಬಸುಂ ಅವರು ಆಯ್ಕೆಯಾಗಿದ್ದಾರೆ.

ವಿರಾಜಪೇಟೆ ಪುರಸಭೆಯಲ್ಲಿ ಒಟ್ಟು 18 ಸ್ಥಾನ ಬಲವಿದ್ದು, ದೇಚಮ್ಮ ಕಾಳಪ್ಪ 11 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.  ಪುರಸಭೆಯಲ್ಲಿ ಬಿಜೆಪಿಯ 8, ಕಾಂಗ್ರೆಸ್‌ನ 6, ಜೆಡಿಎಸ್‌ನ 1 ಹಾಗೂ ಮೂವರು ಪಕ್ಷೇತರ ಸದಸ್ಯರಿದ್ದರು.

ಇನ್ನು ಬಿಜೆಪಿಯ ಜೂನಾ ಸುನೀತಾ 8 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಚುನಾವಣೆಯಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗಿಯಾಗಿದ್ದರು. ಈ ವೇಳೆ ಪುರಸಭೆ ಮುಂಭಾಗ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

40 mins ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

45 mins ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

51 mins ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

59 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

1 hour ago