ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್ ಗದ್ದುಗೆ ಏರಿ ದಾಖಲೆ ಮಾಡಿದೆ.
ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಫೌಝಿಯಾ ತಬಸುಂ ಅವರು ಆಯ್ಕೆಯಾಗಿದ್ದಾರೆ.
ವಿರಾಜಪೇಟೆ ಪುರಸಭೆಯಲ್ಲಿ ಒಟ್ಟು 18 ಸ್ಥಾನ ಬಲವಿದ್ದು, ದೇಚಮ್ಮ ಕಾಳಪ್ಪ 11 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪುರಸಭೆಯಲ್ಲಿ ಬಿಜೆಪಿಯ 8, ಕಾಂಗ್ರೆಸ್ನ 6, ಜೆಡಿಎಸ್ನ 1 ಹಾಗೂ ಮೂವರು ಪಕ್ಷೇತರ ಸದಸ್ಯರಿದ್ದರು.
ಇನ್ನು ಬಿಜೆಪಿಯ ಜೂನಾ ಸುನೀತಾ 8 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಚುನಾವಣೆಯಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗಿಯಾಗಿದ್ದರು. ಈ ವೇಳೆ ಪುರಸಭೆ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…