Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.

ಭಾರೀ ಮಳೆಗೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತ್ರಿವೇಣಿ ಸಂಗಮದ ಉದ್ಯಾನವನ ಸಂಪೂರ್ಣ ಜಲಾವೃತವಾಗಿದೆ.

ಸುತ್ತಮುತ್ತಲಿನ ಕೃಷಿ ಗದ್ದೆಗಳಿಗೂ ನೀರು ನುಗ್ಗಿದೆ. ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇರುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ನಾಪೋಕ್ಲು ಅಯ್ಯಗೇರಿ ಸಣ್ಣ ಪುಲಿಕೋಟ್ಟು ರಸ್ತೆ ಮೇಲೆಯೂ ನೀರು ಹರಿಯುವ ಸಾಧ್ಯತೆ ಇದೆ.

Tags:
error: Content is protected !!