ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ ರೌದ್ರ ನರ್ತನಕ್ಕೆ ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಈ ವೀಡಿಯೋ ಭಾರೀ ಸದ್ದು ಮಾಡುತ್ತಿದೆ.
ಈ ಬಗ್ಗೆ ʼಕೂರ್ಗ್ ದಿ ಕಾಶ್ಮೀರ್ ಆಫ್ ಕರ್ನಾಟಕʼ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೆಯಾಗಿದ್ದು, ನೀರು ಉಕ್ಕುತ್ತಿರುವ ದೃಶ್ಯ ಎಲ್ಲರ ಹುಬ್ಬೇರಿಸುವಂತಿದೆ.
ಆವರ್ತಿಯಿಂದ ಮುಳಸೋಗೆ ಮಾರ್ಗದ ರಸ್ತೆ ಬದಿಯಲ್ಲಿ ನೀರು ಉಕ್ಕುತ್ತಿರುವ ದೃಶ್ಯ ಕಂಡುಬಂದಿದೆ. ಒಂದು ಮರದ ಎತ್ತರಕ್ಕೆ ನೀರು ಚಿಮ್ಮುತ್ತಿರುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ. ಉಕ್ಕಿ ಹರಿಯುತ್ತಿರುವ ನೀರು ನದಿಗೆ ಸೇರುತ್ತಿದ್ದು, ಈ ಭಾಗದಲ್ಲಿ ಕೆಲಕಾಲ ಪ್ರಯಾಣ ಸ್ಥಗಿತವಾಗಿತ್ತು.
ಮಳೆ ನೀರಿನಿಂದ ಭೂಮಿಯಲ್ಲಿ ಚಿಮ್ಮಿರಬಹುದು ಎಂದು ಕೆಲವರು ಹೇಳಿದರೇ, ಮತ್ತೆ ಕೆಲವರು ಕೆರೆಗಳಿಗೆ ನೀರು ತುಂಬಿಸುವ ಪೈಪ್ ಹೊಡೆದು ಹೋಗಿದ್ದು, ನೀರು ಮರದೆತ್ತರಕ್ಕೆ ಚಿಮ್ಮುತ್ತಿದೆ ಆ ಮೂಲಕ ನೀರು ಪೋಲಾಗುತ್ತಿದೆ ಎಂದು ಕೆಲವರು ಆಕ್ರೋಶ ಹೊರಹಾಕಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…