ಕೊಡಗು: ಜಿಲ್ಲೆಯ ಕುಶಾಲನಗರದ ಕೊಪ್ಪ ಬಳಿ ಕಾರಂಜಿಯಂತೆ ನೀರು ಉಕ್ಕುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಜಿಲ್ಲೆಯಾದ್ಯಂತ ಮುಂಗಾರು ಭಾರೀ ಚುರುಕಾಗಿದ್ದು, ಮಳೆಯ ರೌದ್ರ ನರ್ತನಕ್ಕೆ ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಈ ವೀಡಿಯೋ ಭಾರೀ ಸದ್ದು ಮಾಡುತ್ತಿದೆ.
ಈ ಬಗ್ಗೆ ʼಕೂರ್ಗ್ ದಿ ಕಾಶ್ಮೀರ್ ಆಫ್ ಕರ್ನಾಟಕʼ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೆಯಾಗಿದ್ದು, ನೀರು ಉಕ್ಕುತ್ತಿರುವ ದೃಶ್ಯ ಎಲ್ಲರ ಹುಬ್ಬೇರಿಸುವಂತಿದೆ.
ಆವರ್ತಿಯಿಂದ ಮುಳಸೋಗೆ ಮಾರ್ಗದ ರಸ್ತೆ ಬದಿಯಲ್ಲಿ ನೀರು ಉಕ್ಕುತ್ತಿರುವ ದೃಶ್ಯ ಕಂಡುಬಂದಿದೆ. ಒಂದು ಮರದ ಎತ್ತರಕ್ಕೆ ನೀರು ಚಿಮ್ಮುತ್ತಿರುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ. ಉಕ್ಕಿ ಹರಿಯುತ್ತಿರುವ ನೀರು ನದಿಗೆ ಸೇರುತ್ತಿದ್ದು, ಈ ಭಾಗದಲ್ಲಿ ಕೆಲಕಾಲ ಪ್ರಯಾಣ ಸ್ಥಗಿತವಾಗಿತ್ತು.
ಮಳೆ ನೀರಿನಿಂದ ಭೂಮಿಯಲ್ಲಿ ಚಿಮ್ಮಿರಬಹುದು ಎಂದು ಕೆಲವರು ಹೇಳಿದರೇ, ಮತ್ತೆ ಕೆಲವರು ಕೆರೆಗಳಿಗೆ ನೀರು ತುಂಬಿಸುವ ಪೈಪ್ ಹೊಡೆದು ಹೋಗಿದ್ದು, ನೀರು ಮರದೆತ್ತರಕ್ಕೆ ಚಿಮ್ಮುತ್ತಿದೆ ಆ ಮೂಲಕ ನೀರು ಪೋಲಾಗುತ್ತಿದೆ ಎಂದು ಕೆಲವರು ಆಕ್ರೋಶ ಹೊರಹಾಕಿದ್ದಾರೆ.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…